ದುರಿತಗಜ ಪಂಚಾನನ - Duritha Gaja Panchanana

|| ಹರಿ ಭಜನೆ ||




ದುರಿತಗಜ ಪಂಚಾನನ ನರ-

ಹರಿಯೆ ದೇವರ ದೇವ ಕಾಯೊ ಗೋವಿಂದ ||ಪ||


ಹೆಸರುಳ್ಳ ನದಿಗಳನೊಳಗೊಂಬ ಸಮುದ್ರನು

ಬಿಸುಡುವನೆ ಕಾಲುಹೊಳೆಗಳನು ಗೊವಿಂದ ||೧||


ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆ

ಬಂಧನ ಬಿಡಿಸೆನ್ನ ತಂದೆ ಗೋವಿಂದ ||೨||


ಹೆತ್ತ ಮಕ್ಕಳು ಮರುಳಾದರೆ ತಾಯ್ತಂದೆ

ಎತ್ತದೆ ನೆಲಕೆ ಬಿಸುಡುವರೆ ಗೋವಿಂದ ||೩||


ಮುನ್ನ ಮಾಡಿದ ಕರ್ಮ ಬೆನ್ನಟ್ಟಿ ಬಂದರೆ

ನಿನ್ನನ್ನು ಓಲೈಸಲ್ಯಾಕೆ ಗೋವಿಂದ ||೪||


ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ

ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ ||೫||


ಅರಸು ಮುಟ್ಟಲು ದಾಸಿ ರಂಭೆಯಾದಳು ದೇವ

ಪರುಷ ಮುಟ್ಟಲು ಲೋಹ ಹೊನ್ನು ಗೋವಿಂದ ||೬||


ಮಾನಾಭಿಮಾನದೊಡೆಯ ರಂಗವಿಠಲ

ಜ್ಞಾನಿಗಳರಸನೆ ಕಾಯೋ ಗೋವಿಂದ ||೭||




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು