ರಾಯರೇ ಗತಿಯು ನಮಗೆ - Rayare Gatiyu Namange

|| ರಾಘವೇಂದ್ರ ರಾಯರ ಸ್ತುತಿ ||




ರಾಯರೇ ಗತಿಯು ನಮಗೆ । 

ವಾಯುಸುಮತೋದ್ಧಾರ ಶ್ರೀ ರಾಘವೇಂದ್ರ ಗುರು।।ಪ।।


ಶುಕ ಪಿಕ ಮೊದಲಾದ ವಿಕುಲಕ್ಕೆ ಮಧುರ ಫಲ । 

ಯುಕುತಮಾಗಿಹ ಚೂತ ಸುಕುಜ ಗತಿಯೋ । 

ಮುಕುತಿಗೆ ಸುಜ್ಞಾನ ಭಕುತಿ ವಿರುಕುತಿ ಗತಿಯು । 

ಅಕಳಂಕ ಶ್ರೀಮಂತ ಮಂದಿರದಿ ನೆಲಸಿಪ್ಪ ।।೧।।


ಋಷಿಗಳಿಗೆ ಪ್ರಣವವೇ ಗತಿ ಝಷಗಳಿಗೆ ಜಲವೇ ಗತಿ|

 ಸಸಿಗಳಭಿವೃದ್ಧಿಗೆ ಶಶಿಯೇ ಗತಿಯು । 

ಶಿಶುಗಳಿಗೆ ಜಲವೆ ಗತಿ ಪಶುಗಳಿಗೆ ತೃಣವೆ ಗತಿ । 

ಈಸು ಮಹಿಮೆಲಿ ಮೆರೆವ ಮಿಸುನಿ ಶಯ್ಯಜರಾದ ।।೨।।


ಕಾಮಿನೀ ಮಣಿಯರಿಗೆ ಕೈಪಿಡಿದ ಕಾಂತ ಗತಿ । 

ಭೂಮಿ ವಿಬುಧರಿಗೆ ಮಧ್ವ ಶಾಸ್ತ್ರ ಗತಿಯೋ । 

ತಾಮರಸ ಸಖ ಸುತನ ಭಯ ಪೋಪುವುದಕೆ । 

ಶ್ರೀ ಶ್ಯಾಮಸುಂದರ ವಿಠ್ಠಲ ಸ್ವಾಮಿ ನಾಮವೇ ಗತಿಯೋ।।೩।।




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು